
ದಿನಾಂಕ 25-06-2025 ಬುಧುವಾರದಂದು ಮಾದಕ ವಸ್ತು ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮವು ಕುಷ್ಟಗಿ ನಗರದ ಬಸವ ಭವನದಲ್ಲಿ ನಡೆಯಿತು.
ಕೊಪ್ಪಳ ಜಿಲ್ಲೆಯ
ಕುಷ್ಟಗಿ ಯಲ್ಲಿ : ಪೊಲೀಸ್ ಇಲಾಖೆ ಕುಷ್ಟಗಿ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಕುಷ್ಟಗಿ, ತಾಲೂಕು ವಕೀಲರ ಸಂಘ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 25-06-2025 ಬುಧುವಾರದಂದು ಮಾದಕ ವಸ್ತು ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮವು ಕುಷ್ಟಗಿ ನಗರದ ಬಸವ ಭವನದಲ್ಲಿ ನಡೆಯಿತು.
ಮಂಜುನಾಥ ಆರ್. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ತಾಲೂಕಾ ಕಾನೂನು ಸೇವಾ ಸಮಿತಿ, ಕುಷ್ಟಗಿ ಇವರು ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಯುವಕರು ತಮ್ಮ ಆರೋಗ್ಯದ ಮೇಲೆ ಕಾಳಜಿ
ಹೊಂದಬೇಕು, ಮಾದಕ ವಸ್ತುಗಳ ಸೇವನೆಯು ನಮ್ಮ ಜೀವನವನ್ನು ಹಾಳು ಮಾಡುತ್ತದೆ ಹೀಗಾಗಿ ಅವುಗಳಿಂದ ಬಹುದೂರವೇ ಇರುವುದು ಒಳ್ಳೆಯದು ಎಂದು ಹೇಳಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌಳಗಿ ಮಾತನಾಡಿ, ಇತ್ತೀಚೆಗೆ ಪ್ರಚಾರ ಮಾಧ್ಯಮದ ಮೂಲಕ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾಕಷ್ಟು ಮಾಹಿತಿಗಳನ್ನು ನೀಡುತ್ತಿವೇ ಒಳ್ಳೆಯದು ಯಾವುದು ಕೆಟ್ಟದ್ದು ಯಾವುದು ಎನ್ನುವ ವಿಚಾರ ತಿಳಿದು ನಡೆದುಕೊಳ್ಳಬೇಕು. ನಮ್ಮ ದೇಶದ ಭವಿಷ್ಯ ರೂಪಿಸ ಬೇಕಾದರೆ ಯುವಕರು ಮಾದಕ ವಸ್ತುಗಳ ಸೇವನೆ ಬಗ್ಗೆ ಹಾಗೂ ಮಾರಾಟದ ಬಗ್ಗೆ ಜಾಗೃತಿ ಇರಲಿ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ
ಸಿಪಿಐ ಯಶವಂತ ಬಿಸನಳ್ಳಿ ಮಾತನಾಡಿ ಹೆತ್ತವರು ಮಕ್ಕಳ ಬಗ್ಗೆ ಒಳ್ಳೆಯ ಭವಿಷ್ಯ ರೂಪಿಸುವಲ್ಲಿ ನಿರತರಾಗಿದ್ದಾರೆ, ಆದರೆ ಕೆಟ್ಟ ಸ್ನೇಹಿತರ ಸಹವಾಸದಿಂದಾ ಡ್ರಗ್ಸ್ ಚಟಕ್ಕೆ ಬಲಿಯಾಗದೆ ಎಚ್ಚರವಿರಲಿ ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ ಇದೆ ಎಂಬುದನ್ನು ಅರಿತು ಬಾಳಬೇಕು ಎಂದರು. ಕಾರ್ಯಕ್ರಮ ಕುರಿತು ವಕೀಲರ ಸಂಘದ ಅಧ್ಯಕ್ಷರಾದ
ಎಸ್.ಜಿ.ಪಾಟೀಲ್, ಪಿಎಸ್ಐ ಹನಮಂತಪ್ಪ ತಳವಾರ ಮಾತನಾಡಿದರು. ವೇದಿಕೆ ಮೇಲೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಆರ್. ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮಹಾಂತೇಶ ಚೌಳಗಿ, ಆರಕ್ಷಕ ವೃತ್ತ ನಿರೀಕ್ಷಕರಾದ ಯಶವಂತ್ ಬಿಸನಳ್ಳಿ, ವಕೀಲರ ಸಂಘದ ಅಧ್ಯಕ್ಷರಾದ ಎಸ್.ಜಿ.ಪಾಟೀಲ್, ಆರಕ್ಷಕ ಉಪ ನಿರೀಕ್ಷಕರಾದ ಹನಮಂತಪ್ಪ ತಳವಾರ, ವಕೀಲರ ಸಂಘದ ಕಾರ್ಯದರ್ಶಿ ಆನಂದ ಡೊಳ್ಳಿನ, ಮತ್ತು ವಕೀಲರಾದ ರಮೇಶ್ ಪಿ. ಹಾಗೂ ಎನ್ ಟಿ ಮದ್ನಾಳ್ ಉಪಸ್ಥಿತರಿದ್ದರು.
ಬಸವರಾಜ್ ಪೊಲೀಸ್ ಕಾರ್ಯಕ್ರಮ ನಿರೂಪಿಸಿ ವಂದನಾರ್ಪಣೆ ಸಲ್ಲಿಸಿದರು.
ಇದೇ ವೇಳೆ ಎಸ್ ವಿ ಎಂ ಪ್ಯಾರಾ ಮೆಡಿಕಲ್ ಇನ್ಸ್ಟಿಟ್ಯೂಟ್ ಮತ್ತು ಬಿಜೆಎಸ್ ಪ್ಯಾರಾ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಹಾಗೂ ನರ್ಸಿಂಗ್ ಕಾಲೇಜ್ ಅಧ್ಯಕ್ಷರಾದ ಶ್ರೀಶೈಲ್ ವಾದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕುಷ್ಟಗಿ ನಗರದ ಮಲ್ಲಯ್ಯ ವೃತದಿಂದ ಬಸವೇಶ್ವರ ವೃತ್ತದವರೆಗೆ ಜಾಥಾ ಕಾರ್ಯಕ್ರಮ ನಡೆಯಿತು
ಪೊಲೀಸ್ ಇಲಾಖೆ ಕುಷ್ಟಗಿ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಕುಷ್ಟಗಿ, ತಾಲೂಕು ವಕೀಲರ ಸಂಘ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 25-06-2025 ಬುಧುವಾರದಂದು ಮಾದಕ ವಸ್ತು ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮವು ಕುಷ್ಟಗಿ ನಗರದ ಬಸವ ಭವನದಲ್ಲಿ ನಡೆಯಿತು.
ಮಂಜುನಾಥ ಆರ್. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ತಾಲೂಕಾ ಕಾನೂನು ಸೇವಾ ಸಮಿತಿ, ಕುಷ್ಟಗಿ ಇವರು ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.