logo

ಪತ್ರಕರ್ತ ವೆಂಕಟೇಶ ಸಂಪ ಅವರಿಗೆ "ಕನ್ನಡ ಸೇವಾ ರತ್ನ ಪ್ರಶಸ್ತಿ 2025" ಪ್ರದಾನ: ಶ್ರೀ ಗುರು ಪಂಚಾಕ್ಷರಿ ಪುಟ್ಟರಾಜು ಸಂಗೀತ ಶಾಲೆ ಬೆಂಗಳೂರ

ಪತ್ರಕರ್ತ ವೆಂಕಟೇಶ ಸಂಪ ಅವರಿಗೆ "ಕನ್ನಡ ಸೇವಾ ರತ್ನ ಪ್ರಶಸ್ತಿ 2025" ಪ್ರದಾನ:

ಶ್ರೀ ಗುರು ಪಂಚಾಕ್ಷರಿ ಪುಟ್ಟರಾಜು ಸಂಗೀತ ಶಾಲೆ ಬೆಂಗಳೂರು (ರಿ) ಗೀತಾ ಸಂಗೀತಾ ಆಕಾಡೆಮಿ ಟ್ರಸ್ಟ್ (ರಿ) ಮೇಘ ಮೈತ್ರಿ ಸಂಘಟನೆಯವರು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನೀಡುವ ನೀಡುವ
"2025 ರ ಕನ್ನಡ ಸೇವಾರತ್ನ ರಾಜ್ಯ ಪ್ರಶಸ್ತಿ "ಯನ್ನು ಪತ್ರಕರ್ತ, ಸಂಪದ ಸಾಲು ಪತ್ರಿಕೆ ಸಂಪಾದಕ, ವೆಂಕಟೇಶ ಎಸ್ ಸಂಪ ಅವರಿಗೆ ಜೂನ್ 28 ರಂದು ಬೆಂಗಳೂರಿನ ಸಾಹಿತ್ಯ ಪರಿಷತ್ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು.
ಖ್ಯಾತ ಕವಿ ಮಹೇಂದ್ರ ಕುರ್ಡಿ,ಸಾಹಿತಿ ಶಿಶೀರಾ,ಸಂಗೀತ ನಿರ್ದೇಶಕ ರಾಜು ಎಮ್ಮಿಗನೂರು,ಸಂಘಟಕ ರಮೇಶ್ ಕಮತಗಿ,ವೆಂಕಟರಾಮು,ಹರೀಶ್,ಹೋರಾಟಗಾರ್ತಿ ಭಾಗ್ಯ,ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ವೆಂಕಟೇಶ ಸಂಪ ಅವರು
ಕಳೆದ 19 ವರ್ಷಗಳಿಂದ ನಿರಂತರವಾಗಿ ಸಂಪದ ಸಾಲು ಎನ್ನುವ ಧನಾತ್ಮಕ ಪತ್ರಿಕೆಯನ್ನು ನಡೆಸುತ್ತಿರುವ ವೆಂಕಟೇಶ ಸಂಪರವರ ಸಾವಿರಾರು ಲೇಖನಗಳು ರಾಜ್ಯದ ಎಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾಗಿವೆ ಹಾಗೂ ರೇಡಿಯೋ ಟಿವಿಗಳಲ್ಲಿ ನೂರಾರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಇವರು ಹಲವಾರು ಟೀವಿ ಚಾನಲ್ ಗಳ ಪ್ಯಾನಲ್ ಡಿಸ್ಕಷನ್ ಗಳಲ್ಲಿ ಭಾಗವಹಿಸುವುದರ ಜೊತೆಗೆ ಹಲವಾರು ಸಿನಿಮಾ ಧಾರವಾಹಿಗಳಲ್ಲಿ ನಟಿಸಿದ್ದಾರೆ.
ರಕ್ತದಾನ,ನೇತ್ರದಾನ,ಪರಿಸರ ಜಾಗೃತಿ ಅಭಿಯಾನ,ನೀರು ಉಳಿಸಿ ಅಭಿಯಾನ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದಾರೆ.ಎಂಬಿಏ ಪದವೀಧರ ಆಗಿರುವ ವೆಂಕಟೇಶ ಸಂಪ ಅವರು, ಹಲವು ಮಿಶ್ರ ಬೆಳೆಗಳನ್ನು ಬೆಳೆದು, ಸಾವಯವ ಕೃಷಿಯಲ್ಲೂ ಸಾಧನೆ ಮಾಡಿದ್ದಾರೆ.
"ಸಂಪದ ಫೌಂಡೇಶನ್ ಫಾರ್ ಪಬ್ಲಿಕ್ ಅವೇರ್ನಸ್" ಸಂಸ್ಥೆ ಮೂಲಕ ಹಲವಾರು ಸಾಮಾಜಿಕ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತಿದ್ದಾರೆ.
ಇದೆಲ್ಲವನ್ನು ಪರಿಗಣಿಸಿ ವೆಂಕಟೇಶ ಸಂಪ ಅವರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು ಎಂದು ಸಂಘಟಕ,ಸಂಗೀತ ನಿರ್ದೇಶಕ,ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯ ರಾಜು ಎಮ್ಮಿಗನೂರು ಅವರು ತಿಳಿಸಿದ್ದಾರೆ.

10
384 views