logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಭಾಲ್ಕಿ ತಾಲೂಕಿನ ಮರುರ್ ಕಾಲುವೆ ಬಳಿ ನಡೆದ ಹೃದಯವಿದ್ರಾವಕ ಘಟನೆ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ. ಬೀದರ ತಾಲೂಕಿನ ಮೈಲೂರು ನಿವಾಸಿಗಳಾದ ಒಂದೇ ಕುಟುಂಬದ ಆರು ಜನರು ಆತ್ಮಹತ್ಯೆಗೆ

ಭಾಲ್ಕಿ ತಾಲೂಕಿನ ಮರುರ್ ಕಾಲುವೆ ಬಳಿ ನಡೆದ

ಹೃದಯವಿದ್ರಾವಕ ಘಟನೆ ಮನಸ್ಸಿಗೆ ತೀವ್ರ ನೋವುಂಟುಮಾಡಿದೆ. ಬೀದರ ತಾಲೂಕಿನ ಮೈಲೂರು ನಿವಾಸಿಗಳಾದ ಒಂದೇ ಕುಟುಂಬದ ಆರು ಜನರು ಆತ್ಮಹತ್ಯೆಗೆ ಯತ್ನಿಸಿ, ತಂದೆ ಸೇರಿದಂತೆ ಮೂವರು ನಿರಪರಾಧಿ ಮಕ್ಕಳು ಜೀವ ಕಳೆದುಕೊಂಡಿರುವುದು ಅತೀವ ದುಃಖಕರ ಸಂಗತಿ. ಅದೃಷ್ಟವಶಾತ್ ತಾಯಿ ಮತ್ತು ಒಬ್ಬ ಮಗ ಬದುಕುಳಿದಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದೆನು. ಆತ್ಮಹತ್ಯೆಗೆ ಕಾರಣವಾದ ಹಿನ್ನೆಲೆ ಹಾಗೂ ಪ್ರಚೋದನೆ ಸೇರಿದಂತೆ ಎಲ್ಲಾ ವಿಷಯಗಳ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಒದಗಿಸಲಾಗುವುದು. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ ಮತ್ತು ಬದುಕುಳಿದ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ

80
1194 views

Comment